Saturday, May 18, 2024

ಪ್ರಾಯೋಗಿಕ ಆವೃತ್ತಿ

ಎಚ್.ಡಿ.ಚೌಡಯ್ಯ ಪ್ರತಿಮೆ ಪ್ರತಿಷ್ಠಾಪನೆಗೆ ಧನಸಹಾಯ

ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಮಾಜಿ ಶಾಸಕ,ಸಹಕಾರಿ ಧುರೀಣ ಡಾ. ಶ್ರೀ ಹೆಚ್.ಡಿ ಚೌಡಯ್ಯನವರ ಪ್ರತಿಮೆ ನಿರ್ಮಿಸುತ್ತಿದ್ದು, ಪ್ರತಿಮೆ ಪ್ರತಿಷ್ಠಾಪನಾ ಸಮಿತಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ಮತ್ತು ಮನ್ ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರು 25,000 ರೂ.ಗಳ ಸಹಾಯಧನ ನೀಡಿದರು.

ಮಾಜಿ ಶಾಸಕ ಎಚ್.ಡಿ.ಚೌಡಯ್ಯ ಅವರು ಪಿಇಟಿ ಅಧ್ಯಕ್ಷರಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಶ್ಲಾಘನೀಯ. ಅಂತಹ ಮಹನೀಯರ ಆದರ್ಶ ಮುಂದಿನ ಪೀಳಿಗೆಗೆ ಗೊತ್ತಾಗಲಿ ಎಂಬ ಸದುದ್ದೇಶದಿಂದ ಸ್ಥಾಪಿಸಲಾಗುತ್ತಿರುವ ಪ್ರತಿಮೆ ನಿರ್ಮಾಣಕ್ಕೆ ನಮ್ಮ ಟ್ರಸ್ಟ್ ವತಿಯಿಂದ ಧನಸಹಾಯ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಈ ಸಂದರ್ಭದಲ್ಲಿ ಒಕ್ಕಲಿಗರ ಸಂಘದ ಮಾಜಿ ಸದಸ್ಯ ಶಿವಣ್ಣ,ರಾಮು,ಯೋಗೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!