ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಗ್ರಾಮದ ಗದ್ದೆ ಬಯಲಿನಲ್ಲಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 12 ಜನರನ್ನು ಬಂಧಿಸಿ ₹ 60 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಮಾರ್ಗದರ್ಶನದಲ್ಲಿ ಮಂಡ್ಯ ಪೊಲೀಸರ ತಂಡ ಶುಕ್ರವಾರ ಸಂಜೆ ದಾಳಿ ನಡೆಸಿದೆ.
ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, 12 ಜನರನ್ನು ಬಂಧಿಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.