ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿ, ದೇಶಕ್ಕೆ ಸ್ವಾತಂತ್ರ ತಂದು ಕೊಡುವಲ್ಲಿ ಯಶಸ್ವಿಯಾದ ಗಾಂಧಿಜೀಯವರ ಸತ್ಯದ ಮಾರ್ಗದಲ್ಲಿ ದೇಶದ ಪ್ರತಿಯೊಬ್ಬರು ನಡೆಯಬೇಕೆಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಪಾಲಾರ್ಪಣೆ ಮಾಡಿ ನಂತರ ನೂರಾರು ಕಾರ್ಯಕರ್ತರೊಂದಿಗೆ ಘೋಷಣೆ ಕೂಗುತ್ತಾ ಸದ್ಭಾವನ ನಡಿಗೆ ಮೂಲಕ ಸಾಗಿ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಾಂಧೀಜಿಯವರಂತೆ ಸತ್ಯದ ಮಾರ್ಗದಲ್ಲಿ ನಡೆಯಬೇಕು. ಅಲ್ಲದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಅಧ್ಯಕ್ಷತೆಯನ್ನು ವಹಿಸಿದ್ದ ಮಹಾತ್ಮ ಗಾಂಧೀಜಿಯವರ ತ್ಯಾಗ ಮರೆಯುವಂತಿಲ್ಲ ಎಂದು ಬಣ್ಣಿಸಿದರು.
ಮಳವಳ್ಳಿ ಪಟ್ಟಣದ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ಸದ್ಭಾವನ ನಡಿಗೆ ಕಾರ್ಯಕ್ರಮದಲ್ಲಿ ನೂರಾರು ಜನರು ಶಾಸಕ ಪಿಎಂ ನರೇಂದ್ರ ಸ್ವಾಮಿ ನೇತೃತ್ವದಲ್ಲಿ ಭಾಗಿಯಾಗಿದ್ದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ ರಾಜು, ದೊಡ್ಡಯ್ಯ, ಪುರಸಭೆ ಸದಸ್ಯರಾದ ರಾಜಶೇಖರ್, ಪ್ರಮೀಳಾ ಶಿವಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ, ಮುಖಂಡರಾದ ದೇವರಾಜು, ಸುಷ್ಮಾ, ರಾಜು, ಕೃಷ್ಣಮೂರ್ತಿ, ಅಂಬರೀಶ್, ವಿಶ್ವಾಸ್, ಬಸವರಾಜು, ಚೇತನ ಹಾಗೂ ನಾಯಕ್ ಸೇರಿದಂತೆ ಇತರರು ಭಾಗವಹಿಸಿದ್ದರು.