Thursday, September 19, 2024

ಪ್ರಾಯೋಗಿಕ ಆವೃತ್ತಿ

ಗಡಿನಾಡ ಕನ್ನಡಿಗರ ಮೇಲಿನ ದೌರ್ಜನ್ಯ ಸಹಿಸಲ್ಲ

ಮಹಾರಾಷ್ಟ್ರದ ಕೆಲವು ಕಿಡಿಗೇಡಿಗಳು ಗಡಿನಾಡಿನ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿದ್ದು,ಇದನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ ತಿಳಿಸಿದರು.

ಮಂಡ್ಯ ನಗರದ ಹರ್ಡಿಕರ್ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವೀರ ಕನ್ನಡಿಗರ ಘರ್ಜನೆ, ಮಂಡ್ಯ ಜಿಲ್ಲೆ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಕನ್ನಡ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮಹಾರಾಷ್ಟ್ರ ರಾಜ್ಯದಲ್ಲಿ ಕನ್ನಡಿಗರು ಎಲ್ಲೆಲ್ಲಿರುವರೋ ಅಲ್ಲಿಗೆ ತೆರಳಿ ಎಲ್ಲಾ ಕನ್ನಡಪರ ಸಂಘಟನೆಗಳು ಒಂದುಗೂಡಿ ಸಂಘಟನೆ, ಹೋರಾಟ ಮಾಡಿ ಬೆಳಗಾವಿಯಲ್ಲಿ ಇರುವ ಮರಾಠಿಗರನ್ನು ನಮ್ಮ ರಾಜ್ಯದಿಂದ ಓಡಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಎಂ. ಸಿ. ನವೀನ್, ಉಪಾಧ್ಯಕ್ಷ ಸಿದ್ದರಾಜು, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರಾಧ್ಯ, ಮಹಿಳಾ ಸಂಘಟಕಿ ವೀಣಾ, ಕರವೇ ಸಂಸ್ಥಾಪಕ ಮಂಜುನಾಥ್ ಕೆ, ರಾಜ್ಯಾಧ್ಯಕ್ಷ ಎನ್ ಗಣೇಶ್ ಗೌರವಾಧ್ಯಕ್ಷ ಅಬುಬಕ್ಕರ್, ಜಿಲ್ಲಾ ಗೌರವಾಧ್ಯಕ್ಷ ರವಿ, ಸಾಹಿತಿ ಟಿ ಸತೀಶ್ ಜವರೇಗೌಡ, ಶಿವಶರಣ ನಾಗರಾಜ್ , ಪದಾಧಿಕಾರಿಗಳಾದ ರಾಜು ಶ್ರೀನಿವಾಸ್ ಮುನಿರಾಜು ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!