Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಭಿನ್ನಮತ ಸ್ಪೋಟ : ಮಂಡ್ಯ ಉಸ್ತುವಾರಿ ಮಂತ್ರಿಗೆ ‘ಗೋ ಬ್ಯಾಕ್‌ ಅಶೋಕ್’ ಎಂದ ಕೇಸರಿ ಕಾರ್ಯಕರ್ತರು

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ವಿಚಾರದಲ್ಲಿ ಬಿಜೆಪಿಯಲ್ಲೇ ಭಿನ್ನಮತ ಭುಗಿಲೆದ್ದಿದೆ. ಸಚಿವ ಆರ್‍‌ ಅಶೋಕ್‌ ಅವರನ್ನು ಮಂಡ್ಯ ಉಸ್ತುವಾರಿಯನ್ನಾಗಿ ನೇಮಿಸಿರುವ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡ್ಯ ನಗರದಲ್ಲಿ ‘ಗೋ ಬ್ಯಾಕ್‌ ಅಶೋಕ್’, ‘ಬಾಯ್‌ಕಾಟ್‌ ಆರ್‌ ಆಶೋಕ್‌’ ಎಂಬ ಭಿತ್ತಿಪತ್ರಗಳನ್ನು ಅಂಟಿಸಿ ಕೇಸರಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯದ ವಿವಿ ರಸ್ತೆ, ಸುಭಾಷ್​​ ರಸ್ತೆಗಳಲ್ಲಿರುವ ಹಲವಾರು ಕಟ್ಟಡ ಮತ್ತು ಕಾಂಪೌಂಡ್‌ ಗೋಡೆ ಮೇಲೆ ‘ಗೋ ಬ್ಯಾಕ್​ ಆರ್ ಅಶೋಕ್’, ’ಬಾಯ್ಕಾಟ್‌ ಆರ್. ಅಶೋಕ್‌’​ ಎಂಬ ಭಿತ್ತಿಪತ್ರ ಅಂಟಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

nudikarnataka.com

ಮಂಡ್ಯದ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಕೆ. ಗೋಪಾಲಯ್ಯ ಅವರನ್ನು ತೆರವುಗೊಳಿಸಲಾಗಿದೆ. ಗೋಪಾಲಯ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಂಡ್ಯದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರನ್ನು ಉಸ್ತುವಾರಿ ಸ್ಥಾನದಿಂದ ತೆಗೆಯುವ ಅಗತ್ಯವಿರಲಿಲ್ಲ. ಆದರೂ, ಅವರನ್ನು ಕಿತ್ತೊಗೆದು ಆರ್‍.‌ ಅಶೋಕ್‌ ಅವರನ್ನು ನೇಮಿಸಲಾಗಿದೆ ಎಂದು ಮಂಡ್ಯದ ಬಿಜೆಪಿ ಕಾರ್ಯಕರ್ತರೇ ಕಿಡಿಕಾರಿದ್ದಾರೆ. ಅಲ್ಲದೆ, ಆರ್‍‌. ಅಶೋಕ್‌ ‘ಹೊಂದಾಣಿಕೆ ರಾಜಕಾರಣ’ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ. ಗೋಪಾಲಯ್ಯ ಉತ್ತಮ ಕೆಲಸ ಮಾಡಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬೇಕಿರಲಿಲ್ಲ. ಅದು ಅಲ್ಲದೇ ಆರ್‍‌. ಅಶೋಕ್‌ ಮೇಲೆ ‘ಹೊಂದಾಣಿಕೆ ರಾಜಕಾರಣ’ ಮಾಡಿದ ಆರೋಪವಿದೆ. ಹೊಂದಾಣಿಕೆ ರಾಜಕಾರಣ ಮಾಡಬಾರದೆಂದು ಅಮಿತ್‌ ಶಾ ಮಂಡ್ಯ ಭೇಟಿ ವೇಳೆ ಸ್ಪಷ್ಟವಾಗಿ ಎಚ್ಚರಿಸಿದ್ದಾರೆ. ಮಂಡ್ಯದಲ್ಲಿ ಹೊಂದಾಣಿಕೆ ರಾಜಕಾರಣ ಮಾಡುವುದು ಸರಿಯಲ್ಲ” ಎಂದು ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!