ಬೆಂಗಳೂರು – ಮೈಸೂರು ಹೆದ್ದಾರಿ ಕಾಮಗಾರಿ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲವಾದರೂ ಚುನಾವಣಾ ಕಾರಣಕ್ಕಾಗಿ ತರಾತುರಿಯಲ್ಲಿ ಹೆದ್ದಾರಿಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಆಗಮಿಸುತ್ತಿರುವುದಕ್ಕೆ ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಕೊರಳಿಗೆ ಕಪ್ಪು ಧರಿಸಿ ಶನಿವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮೋದಿ ಆಡಳಿತದಲ್ಲಿ ಗ್ಯಾಸ್ ಬೆಲೆ ಮಿತಿ ಮೀರಿದ ಏರಿಕೆಯಾಗಿದೆ. ಅಲ್ಲದೇ ಪೆಟ್ರೋಲ್, ಡಿಸೇಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಅಪಾರ ಪ್ರಮಾಣದಲ್ಲಿ ಏರಿಕೆಯಾಗಿವೆ. ರೈತರಿಗೆ ಮಾರಕವಾದ ಕೃಷಿ ಕಾಯ್ದೆಯನ್ನು ಕರ್ನಾಟಕ ಸರ್ಕಾರ ವಾಪಸ್ ಪಡೆಯದಿಲ್ಲ, ಈ ಎಲ್ಲಾ ಕಾರಣಗಳಿಗಾಗಿ ಮೋದಿ ಆಗಮನವನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳಿಗೆಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರವಿಕುಮಾರ್ ಗಣಿಗ, ಡಾ.ಹೆಚ್.ಕೃಷ್ಣ, ಅಂಜನಾ ಶ್ರೀಕಾಂತ್, ರುದ್ರಪ್ಪ, ಶ್ರೀಧರ್, ಸಿ.ಆರ್.ರಮೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.