ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನ.14 ರಿಂದ 21 ರವರೆಗೆ ನಡೆದ 47ನೇ ಸಬ್-ಜೂನಿಯರ್ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ ನಲ್ಲಿ ಮಂಡ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದ ಬಾಲಕಿಯರ ಬಾಸ್ಕೆಟ್ಬಾಲ್ನ ದೀಕ್ಷಿತಾ ಡಿ.ಎಂ. ಮಾನಸ ಚಿನ್ನದ ಪದಕ ಗೆದ್ದಿದ್ದಾರೆ.
ಟಿ.ಎ. ಕ್ರೀಡಾಪಟುಗಳು ಹಾಗೂ ಕ್ರೀಡಾ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತರಬೇತುದಾರರಾದ ಭರತ್ರಾಜ್ ಸಿ.ಬಿ. ಕರ್ನಾಟಕ ರಾಜ್ಯ ತಂಡದ ತರಬೇತುದಾರರಾಗಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕದೊಂದಿಗೆ ರಾಜ್ಯಕ್ಕೆ, ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.
ಬಾಸ್ಕೇಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸುವ ರಾಷ್ಟ್ರೀಯ ಮಟ್ಟದ ಬಾಲಕಿಯರ ಬಾಸ್ಕೇಟ್ಬಾಲ್ ಪಂದ್ಯಾವಳಿಗಳಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ತಂಡವು ಪ್ರಥಮ ಸ್ಥಾನ ಗಳಿಸುವ ಮೂಲಕ ಇತಿಹಾಸವನ್ನು ನಿರ್ಮಿಸಿರುವುದು ಸಹ ಹೆಮ್ಮೆಯ ವಿಷಯವಾಗಿದೆ.