Wednesday, September 18, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲೆಯ ಮಕ್ಕಳಿಂದ ಉತ್ತಮ ಸಾಧನೆ : ಕದಲೂರು ಉದಯ್

ವರದಿ : ಪ್ರಭು ವಿ.ಎಸ್ 

ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆತರೆ, ಅವರೂ ಉನ್ನತ ಮಟ್ಟದ ಸಾಧನೆ ಮಾಡುತ್ತಾರೆ ಎಂದು ಸಮಾಜ ಸೇವಕ ಕದಲೂರು ಉದಯ್ ತಿಳಿಸಿದರು.

ಮದ್ದೂರು ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ಸರಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

”ಹಿಂದೆ ಗುರು ಮುಂದೆ ಗುರಿ ಇದ್ದರೆ” ಏನನ್ನಾದರೂ ನೀವುಗಳು ಸಾಧಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದರಲ್ಲದೆ, ತಾವು ಇಂದಿನಿಂದಲೇ ಗುರಿ ಇಟ್ಟುಕೊಂಡು ನಡೆದರೆ ದೇಶಕ್ಕೆ ಉತ್ತಮ ಕೊಡುಗೆ ಕೊಡಲು ಸಾಧ್ಯವಾಗುತ್ತದೆ ಎಂದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತಾಲೂಕಿನ್ಯಾದಂತ ನಡೆಸುತ್ತಿದ್ದು, ಸುಮಾರು 5 ಸಾವಿರಕ್ಕೂ ಹೆಚ್ಚು ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ಇದುವರೆಗೂ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ ಎಂದರು.

ಈ ವೇಳೆ ಪುರಸಭಾ ಸದಸ್ಯ ಕಮಲನಾಥ್, ಟ್ರಸ್ಟಿನ ವಿಜಯ್ ವಿಕ್ರಮ್,ರವಿ ಉದಯ್, ಮುಖಂಡರಾದ ಸತೀಶ್, ಎಂ.ಎಚ್.ಅವಿನಾಶ್, ಪ್ರಾಂಶುಪಾಲೆ ಗೀತಾ ಜೋಗಿಗೌಡ, ಉಪ ಪ್ರಾಂಶುಪಾಲ ಲಿಂಗರಾಜು, ಮೋಹನ್ ಸೇರಿದಂತೆ ಪಟ್ಟಣದ ವಿವಿಧ ಶಾಲೆಯ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!