ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಡಿಎಸ್ಓನ ಜಿಲ್ಲಾ ಸಂಚಾಲಕಿ ಚಂದ್ರಕಲಾರ ಒತ್ತಾಯಿಸಿದ್ದಾರೆ.
ಸುಮಾರು 10 -15 ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವಾ ನಿರತರಾಗಿರುವ ಅತಿಥಿ ಉಪನ್ಯಾಸಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರವು ತಮ್ಮ ಸೇವಾ ಭದ್ರತೆ ಖಾತ್ರಿಪಡಿಸುವಂತೆ ಹಾಗೂ ನಿಯಮಿತ ವೇತನಕ್ಕೆ ಆಗ್ರಹಿಸಿ ಅವರು ಪ್ರತಿಭಟಿಸುತ್ತಿದ್ದಾರೆ.
ನ್ಯಾಯಸಮ್ಮತವಾಗಿರುವ ಅವರ ಬೇಡಿಕೆಗಳನ್ನು ಈಡೇರಿಸಿ ಅತಿಥಿ ಉಪನ್ಯಾಸಕರಿಗೆ ಒಂದು ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ.
ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಮತ್ತು ಈ ಮೂಲಕ ತರಗತಿಗಳು ನಡೆಯಲು ಅನುವು ಮಾಡಿಕೊಟ್ಟು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಬೇಕೆಂದು ಎಐಡಿಎಸ್ಓ ಈ ಮೂಲಕ ಸರ್ಕಾರವನ್ನು ಆಗ್ರಹಿಸಿದೆ.