ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ. ಹಾಗಾಗಿ ವಿರೋಧ ಪಕ್ಷಗಳ ಮಾತಿಗೆ ಮತದಾರರು ಕಿವಿಗೊಡದೇ ಮತದಾರರು ಮಂಡ್ಯ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಅವರನ್ನು ಬೆಂಬಲಿಸುವಂತೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಮನವಿ ಮಾಡಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ,ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಐದು ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದೇವೆ. ಆದರೆ ಕುಮಾರಸ್ವಾಮಿ ಅವರು ಕೆಆರ್ ನಗರದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಸುಳ್ಳು ಹೇಳಿಕೆ ನೀಡಿದ್ದು,ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ರೈತರ ಪರ ಕೆಲಸ ಮಾಡಬೇಕಿದ್ದ ವಿಪಕ್ಷಗಳ ನಾಯಕರು ಇಂತಹ ಬಾಲಿಶ ತನದ ಹೇಳಿಕೆಯನ್ನು ನೀಡುತ್ತಿದ್ದು ಜನತೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಕುಮಾರಸ್ವಾಮಿ ಅವರು ಗ್ಯಾರಂಟಿಯಿಂದ ಮಹಿಳೆಯರು ದಿಕ್ಕು ತಪ್ಪುತ್ತಿದ್ದಾರೆ ಎಂದು ಹೇಳಿದ್ದರು. ಅದನ್ನು ವಿರೋಧಿಸಿದ್ದರು .ಹಾಗಾಗಿ ಸಾರ್ವಜನಿಕರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ.
ಕೇಂದ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ರೂಪಾಯಿ,ದಲಿತರು ಹಿಂದುಳಿದ ವರ್ಗದವರಿಗೆ ವಿವಿಧ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ. ಆದ್ದರಿಂದ ಮೋದಿ ಸರ್ಕಾರವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ವಿನಂತಿಸಿದರು.
ಮೋದಿ ಅವರು ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದು ಭರವಸೆ ನೀಡಿದ್ದರು .ಕಪ್ಪು ಹಣವನ್ನು ತರುತ್ತೇನೆ ಆದರೆ ಈ ಕೆಲಸ ಆಗಲಿಲ್ಲ, ಆದ್ದರಿಂದ ತೆಲಂಗಾಣದಲ್ಲಿ ರೇವಂತ ರೆಡ್ಡಿ ಅವರನ್ನು ಆಶೀರ್ವದಿಸಿದಂತೆ ಎನ್ ಡಿ ಎ ಒಕ್ಕೂಟವನ್ನು ಸೋಲಿಸಿ ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು, ಶಾಸಕ ಗಣಿಗ ರವಿಕುಮಾರ್ ,ಎಂಎಸ್ ಚಿದಂಬರ್, ಯೋಗೇಶ್ ಅಂಜನಾಶ್ರೀಕಾಂತ್ ,ಸುರೇಶ್ ಸೇರಿದಂತೆ ಇತರರಿದ್ದರು.