ಸೇವೆ ಖಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಮಂಡ್ಯದಲ್ಲಿ ಸೋಮವಾರ ಮುಷ್ಕರ ನಡೆಸಿದರು.
ಮಂಡ್ಯ ನಗರದ ಸರ್ ಎಂವಿ ಪ್ರತಿಮೆ ಮುಂಭಾಗ ಮುಷ್ಕರ ಆರಂಭಿಸಿದ ಅತಿಥಿ ಉಪನ್ಯಾಸಕರು, ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರದಲ್ಲಿ ಭಾಗಿಯಾದರು.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರಾಜ್ಯಾದ್ಯಂತ 11,000 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಹಲವಾರು ವರ್ಷಗಳಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದುವರೆಗೂ ಸರ್ಕಾರ ಸೇವೆ ಖಾಯಂ ಮಾಡಿಲ್ಲ, ಸರ್ಕಾರದ ಸವಲತ್ತುಗಳನ್ನು ಕಲ್ಪಿಸುತ್ತಿಲ್ಲ ಜೀವನ ನಿರ್ವಹಣೆ ಕಷ್ಟಕರವಾಗಿದೆ, ಅಷ್ಟೇ ಅಲ್ಲದೆ ಸಾಮಾಜಿಕ ಆರ್ಥಿಕವಾಗಿ ಶೋಚನೀಯ
ಸ್ಥಿತಿಯಲ್ಲಿದ್ದೇವೆ ಎಂದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಕೆ ಪರಮೇಶ, ಗೌರವಾಧ್ಯಕ್ಷ ಜಿ ವಿ ರಮೇಶ್, ಉಪಾಧ್ಯಕ್ಷ ಡಾ. ಎಂ.ಎಸ್ ಚೆಲುವರಾಜು, ಪ್ರಧಾನ ಕಾರ್ಯದರ್ಶಿ ಎಸ್ ಮಂಜು, ಕಾರ್ಯದರ್ಶಿ ಗಣೇಶ್ ಮತ್ತಿತರರಿದ್ದರು.