Saturday, May 18, 2024

ಪ್ರಾಯೋಗಿಕ ಆವೃತ್ತಿ

ಹಾಲಹಳ್ಳಿ ಅಶೋಕ್‌-ಕೆ.ಸಿ.ಜೋಗಿಗೌಡರಿಗೆ “ಸಹಕಾರ ರತ್ನ” ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಸೇರಿ ಹಲವು ಸಹಕಾರ ಸಂಘಗಳು ಆಯೋಜಿಸಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಮೈಸೂರಿನ ಹುಣಸೂರು ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಭಾನುವಾರ ನಡೆಯಿತು.

ಮಂಡ್ಯದ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಾಲಹಳ್ಳಿ ಅಶೋಕ್, ಕೆ.ಸಿ. ಜೋಗಿಗೌಡ, ಎಸ್. ಬಸವೇಗೌಡ, ಎಸ್. ನಾಗೇಂದ್ರ ಅವರಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು “ಸಹಕಾರ ರತ್ನ” ಪ್ರಶಸ್ತಿ ನೀಡಿ ಗೌರವಿಸಿದರು.

“ಸಹಕಾರ ರತ್ನ” ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಹಾಲಹಳ್ಳಿ ಅಶೋಕ್ ಅವರು, ಸಹಕಾರ ಕ್ಷೇತ್ರದಲ್ಲಿ ನನ್ನನ್ನು ಚಿಕ್ಕ ವಯಸ್ಸಿಗೆ ಗುರುತಿಸಿ ಪ್ರಶಸ್ತಿ ನೀಡಿದ್ದಾರೆ. ಇದರಿಂದ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿದೆ. ಭವಿಷ್ಯದಲ್ಲಿ ಕೆಲಸ ಮಾಡಲು ಉತ್ಸಾಹ ನೀಡಿದ್ದಾರೆ. ಅಲ್ಲದೆ ಮಂಡ್ಯದಿಂದ ಹಿತೈಷಿಗಳು ಬಂದು ನನಗೆ ಅಭಿನಂದಿಸಿರುವುದು ಸಂತಸ ತಂದಿದೆ ಎಂದರು.

“ಸಹಕಾರ ರತ್ನ” ಗೌರವ ಸ್ವೀಕರಿಸಿದ ಕೆ.ಸಿ‌ಜೋಗೀಗೌಡ ಅವರು ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ನಾನು ಸಲ್ಲಿಸಿರುವ ಸೇವೆ ಗುರುತಿಸಿ ಪ್ರಶಸ್ತಿ ನೀಡಿರುವುದು ಬಹಳ ಸಂತಸ ತಂದಿದೆ. ಸಹಕಾರ ಕ್ಷೇತ್ರದಲ್ಲಿದ್ದುಕೊಂಡು ಜನರಿಗೆ ಅನೇಕ ಸೇವೆಗಳನ್ನು ಮಾಡಬಹುದು. ನನಗೆ ಈ ಪ್ರಶಸ್ತಿ ಸಿಗಲು ಸಹಕಾರಿ ಕ್ಷೇತ್ರವೇ ಕಾರಣ. ನಾನು ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಈ ಪ್ರಶಸ್ತಿ ಪ್ರೇರಣೆ ನೀಡಿದೆ ಎಂದರು.

ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್,ಕಾಂಗ್ರೆಸ್ ಮುಖಂಡರಾದ ಕೆ.ಸಿ.ಪ್ರಶಾಂತ್ ಬಾಬು, ಪುರುಷೋತ್ತಮ ಮತ್ತಿತರರು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!