ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 4 ರಂದು ನಾಳೆ ನಡೆಯಲಿರುವ ಹನುಮಾ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಅಂಗವಾಗಿ ಮುಂಜಾಗೃತಾ ಕ್ರಮವಾಗಿ ಪೋಲೀಸರು ಬಿಗಿ ಭದ್ರತೆ ಕೈಗೊಂಡಿದ್ದು,ಕಟ್ಟೆಚ್ಚರ ವಹಿಸಿದ್ದಾರೆ.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಪೋಲಿಸರು ಪಥ ಸಂಚಲನ ನಡೆಸಿ ಸಾರ್ವಜನಿಕರಿಗೆ ಎಚ್ಚರಿಕೆಯ ಅರಿವು ಮೂಡಿಸಿದ್ದಾರೆ.
ಜಿಲ್ಲೆಯ ವಿವಿಧೆಡೆಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಹನುಮ ಮಾಲಾಧಾರಿಗಳು ಭಾಗವಹಿಸುವ ನಿರೀಕ್ಷೆಯಿದ್ದು,ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್.ಯತೀಶ್ ನೇತೃತ್ವದಲ್ಲಿ ಭದ್ರತೆಯಲ್ಲಿ ಸುಮಾರು 1500 ಪೊಲೀಸರು, 6 ಕೆ.ಎಸ್.ಆರ್.ಪಿ ತುಕಡಿಗಳು, 9 ಡಿ ಎ ಆರ್ ತುಕಡಿಗಳು , 2 ಡ್ರೋಣ್, 25ಕ್ಕೂ ಹೆಚ್ಚು ಸಿಸಿಟಿವಿ, 7 ಡಿವೈಎಸ್ಪಿ, 15 ಸಿಪಿಐಗಳು ಬಂದೋಬಸ್ತ್ ನಲ್ಲಿ ಇರಲಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಪಟ್ಟಣದ ಜಾಮಿಯಾ ಮಸೀದಿ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.ಯಾರಾದರೂ ಕಾನೂನು ಉಲ್ಲಂಘಿಸಿದರೆ ಬಂಧಿಸಿ ಕಾನೂನು ಕ್ರಮ ಜರುಗಿಸಲಿದ್ದೇವೆ ಎಂದು ಎಸ್ಪಿ ಯತೀಶ್ ಎಚ್ಚರಿಕೆ ನೀಡಿದ್ದಾರೆ.