ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವರಿಗೆ ನಾಳೆ (ನ.20)ರಾಜಮುಡಿ ಕಿರೀಟ ಧಾರಣೆ ನಡೆಯಲಿದೆ.
ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್ ನಾಗರಾಜ್ ಅವರು ಸೋಮವಾರ ಮಂಡ್ಯ ಜಿಲ್ಲಾ ಖಜಾನೆಯಿಂದ ರಾಜಮುಡಿ ತಿರುವಾಭರಣಗಳಿರುವ ಪೆಟ್ಟಿಗೆಯನ್ನು ಪಡೆದು ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗೆ ಹಸ್ತಾಂತರ ಮಾಡಿದರು.
ಇದೇ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.