Tuesday, October 22, 2024

ಪ್ರಾಯೋಗಿಕ ಆವೃತ್ತಿ

ನಿರ್ಮಲಾನಂದಶ್ರೀ ಆಶೀರ್ವಾದ ಪಡೆದ ಹೆಚ್.ಡಿ.ಕುಮಾರಸ್ವಾಮಿ

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದೇಗುಲದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಕುಮಾರಸ್ವಾಮಿ ಅವರು, ಕ್ಷೇತ್ರಾದಿ ದೇವತೆಗಳ ದರ್ಶನ ಪಡೆದು, ಶ್ರೀಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಮಹಾಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕಳೆದ ಅಮವಾಸ್ಯೆ ಪೂಜೆಯಲ್ಲಿ ಹೆಚ್.ಡಿ.ದೇವೇಗೌಡ, ಪುತ್ರ ಹೆಚ್.ಡಿ.ರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಪಾಲ್ಗೊಂಡು ಪೂಜೆ ಸಲ್ಲಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!