Thursday, September 19, 2024

ಪ್ರಾಯೋಗಿಕ ಆವೃತ್ತಿ

ಹಿಟ್ಲರ್ ಸಂಪುಟದ ಗೊಬೆಲ್ಸ್ ನ ಹೊಸ ಅವತಾರ ಅಮಿತ್ ಶಾ : ಎಚ್.ಡಿ.ಕುಮಾರಸ್ವಾಮಿ


  • ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ

  • ಜೆಡಿಎಸ್ ಸರಕಾರ ಆರೂವರೆ ಕೋಟಿ ಕನ್ನಡಿಗರ ಎಟಿಎಂ

ಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೆಡಿಎಸ್ ಪಕ್ಷ ಕುಟುಂಬ ರಾಜಕಾರಣ, ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅವರ ಕುಟುಂಬ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು. ಇದಕ್ಕೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್‌.ಡಿ.ಕುಮಾರಸ್ವಾಮಿ, ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಸ್ ನ ಹೊಸ ಅವತಾರ ಎಂದು ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.

ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಮಂಡ್ಯದಲ್ಲಿ ಸುಖಾಸುಮ್ಮನೆ ಅಲವತ್ತುಕೊಂಡ ನಿಮ್ಮ ಅಸತ್ಯದ ಹಾಹಾಕಾರದ ವರಸೆಯೇ ಸಾಕ್ಷಿ. ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು; ಇದು ನಿಮ್ಮ ಪಕ್ಷದ ನಿಜ ಸ್ವರೂಪ.

ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಲನ ಹೊಸ ಅವತಾರ!! ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು @AmitShah ಅವರೇ? ಎಂದು ಕಿಡಿಕಾರಿದ್ದಾರೆ.

“>

ಜೆಡಿಎಸ್ ಗೆದ್ದರೆ ಕರ್ನಾಟಕ ಒಂದು ಕುಟುಂಬದ ಎಟಿಎಂ ಆಗುತ್ತದೆಂದು ಜಾಗಟೆ ಹೊಡೆದಿದ್ದೀರಿ. ಜೆಡಿಎಸ್ ಸರಕಾರ ಬಂದರೆ, ಅದು ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ. ರೈತರ, ಕಾರ್ಮಿಕರ, ದೀನ ದಲಿತರ, ಅಶಕ್ತರ, ವಿಕಲಚೇತನರ ಎಟಿಎಂ ಆಗುತ್ತದೆ.

ಜೆಡಿಎಸ್ ಜನರ ಎಟಿಎಂ. ನಮ್ಮ ಪಾಲಿಗೆ ಎಟಿಎಂ ಎಂದರೆ ‘ ಎನಿ ಟೈಮ್ ಮನುಷ್ಯತ್ವ ‘ ಎಂದು. ನಿಮ್ಮ ಪಾಲಿಗೆ ಅದು ‘ ಎನಿ ಟೈಮ್ ಮೋಸ ‘. ಸುಳ್ಳಿನ ಜಾಗಟೆ ಹೊಡೆದೇ ದೇಶವನ್ನು ಅಧೋಗತಿಗೆ ತಳ್ಳಿದ್ದೀರಿ. ಶಾ ಅವರೇ, ದೇಶದ ಮಾತು ಹಾಗಿರಲಿ; ಕರ್ನಾಟದಲ್ಲಿ ನಿಮ್ಮ ಪಕ್ಷದ ಎಟಿಎಂಗಳ ಪಟ್ಟಿ ಮೂಡಿದೆ ನೋಡಿ.

“>

ಕರ್ನಾಟಕದ ನಿಮ್ಮ ಬಿಜೆಪಿ ಸರಕಾರ ಕೇವಲ 40% ಸರಕಾರ ಅಲ್ಲವೇ ಅಲ್ಲ. ಅದು 55-60% ಸರಕಾರ!! ನಿಮಗೂ ಮಾಹಿತಿ ಇರುತ್ತದೆ, ಕರ್ನಾಟಕ ನಿಮ್ಮ ಪಕ್ಷಕ್ಕೂ ಎಟಿಎಂ ಹೌದಲ್ಲವೇ? ಈ ಸತ್ಯ ಯಾಕೆ ಮರೆಮಾಚಿದಿರಿ? ಮಂಡ್ಯ ಜನರ ಮುಂದೆ ನಿಮ್ಮ ದಮ್ಮು ತಾಕತ್ತು ನಡೆಯಲ್ಲ, ಅರಿತುಕೊಳ್ಳಿ.

ಇನ್ನು ಕುಟುಂಬದ ವಿಷಯ, ನಿಮ್ಮ ಪಕ್ಷದ ಕುಟುಂಬ ರಾಜಕಾರಣದ ಲೆಕ್ಕ ಗೊತ್ತಿಲ್ಲವೇ? ನಿಮ್ಮ ಸುಪುತ್ರ ಜಯ ಶಾ ಯಾವ ಸೀಮೆ ಕ್ರಿಕೆಟ್ ಪಂಡಿತರು ಎಂದು ಬಿಸಿಸಿಐನಲ್ಲಿ ಕೂತಿದ್ದಾರೆ? ಬಿಸಿಸಿಐನಲ್ಲಿ ಯಾರು ಇರಬೇಕು, ಇರಬಾರದೆಂದು ಸುಪ್ರೀಂ ಕೋರ್ಟಿನ ಸ್ಪಷ್ಟ ಆದೇಶವಿದೆ. ಆ ಆದೇಶಕ್ಕೆ ನಿಮ್ಮ ಮಗ ಅತೀತರೇ? ಈಗ ಹೇಳಿ, ಬಿಸಿಸಿಐ ಯಾರ ಪಾಲಿನ ಎಟಿಎಂ?

“>

ಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ.

ಇವತ್ತು ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ. ಎಷ್ಟಾದರೂ ನೀವು ಸ್ವಯಂ ಘೋಷಿತ ಸಾಚಾ ಅಲ್ಲವೇ? ಉತ್ತರ ಹೇಳಿ ಹೋದರೆ ನಾವೂ ಧನ್ಯರಾಗುತ್ತೇವೆ.

ಸತ್ಯ ಅಜರಾಮರ, ಅಸತ್ಯ ನಿಮ್ಮ ಹಣೆಬರ. ಸತ್ಯದ ಮುಂದೆ ದಮ್ಮು ತಾಕತ್ತು ದುರ್ಬಲ.

ಪಂಚರತ್ನ ರಥಯಾತ್ರೆ ನಿಮ್ಮ ಕಣ್ಣು ಕುಕ್ಕಿದೆ. ಸಾಲಮನ್ನಾ ನಿಮ್ಮ ನಿದ್ದೆಗೆಡಿಸಿದೆ. ಎಷ್ಟೇ ಆದರೂ ಕೇಂದ್ರದ ಸಹಕಾರ ಸಚಿವರಾದ ನಿಮಗೆ ಸಾಲಮನ್ನಾ ದುಃಸ್ವಪ್ನದಂತೆ ಕಾಡುತ್ತಿದೆ ಎನ್ನುವುದು ಗೊತ್ತು.  ಹೆಚ್.ಡಿ.ದೇವೇಗೌಡರು ಮತ್ತು ನನ್ನ ಸಾಧನೆಗಳು ನಿಮ್ಮ ಚಿಂತೆ ಹೆಚ್ಚಿಸಿವೆ. ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ ಎಂದು ಟ್ವಿಟ್ಟರ್ ನಲ್ಲಿ ಕುಟುಕಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!