Thursday, September 19, 2024

ಪ್ರಾಯೋಗಿಕ ಆವೃತ್ತಿ

ಆರೋಗ್ಯ ಯೋಜನೆಯಡಿ ಅಬಾ ಕಾರ್ಡ್ ಅಭಿಯಾನಕ್ಕೆ ಚಾಲನೆ

ಶ್ರೀರಂಗಪಟ್ಟಣ ತಾಲೂಕಿನ ಬಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಅಬಾ ಕಾರ್ಡ್ ಅಭಿಯಾನಕ್ಕೆ, ಮುಖ್ಯೋಪಾಧ್ಯಾಯರಾದ ಸೆಲ್ವಿಯವರು ಚಾಲನೆ ನೀಡಿದರು.

ಗ್ರಾಮ ಒನ್ ಇನ್ ಕೇಂದ್ರ, ಗ್ರಾಮ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಡಿಜಿಟಲ್ ಗ್ರಂಥಾಲಯ ಮಾಹಿತಿ ಕೇಂದ್ರ ಬಲ್ಲೇನಹಳ್ಳಿ, ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಯೋಜನೆಯಿಂದ ಬಡ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಅನುಕೂಲವಾಗಲಿದ್ದು ಯೋಜನೆಯ ಜೊತೆಗೆ ಸರ್ಕಾರದಿಂದ ದೊರೆಯುವಂತಹ ಎಲ್ಲಾ ಸೌಲಭ್ಯಗಳು ಶಾಲಾ ಮಕ್ಕಳಿಗೆ ಸಿಗುವಂತಾಗಲಿ ಎಂದರು.

ಸರ್ಕಾರದ ಸೌಲಭ್ಯ ಪಡೆಯುವುದರ ಜೊತೆಗೆ ತಮ್ಮ ಶೈಕ್ಷಣಿಕ ಬದುಕನ್ನು ಉತ್ತಮಪಡಿಸಿಕೊಳ್ಳಬೇಕು ಸಮಾಜದಲ್ಲಿ ಸ್ವಾಭಿಮಾನಿಯಾಗಿ ಬದುಕು ನಡೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಡಿಜಿಟಲ್ ಗ್ರಂಥಾಲಯ ಮೇಲ್ವಿಚಾರಕರಾದ ಸೋಮಶೇಖರ್ ಮಾತನಾಡಿ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ ಯೋಜನೆಯ ಮಹತ್ವ ಅನುಕೂಲಗಳು ಹಾಗೂ ಸ್ಥಳೀಯ ವೃಂಥಾಲಯದಲ್ಲಿ ಸಿಗುವ ಸೌಲಭ್ಯಗಳು ಸಾಧನೆಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಬಗೆ ಹೇಗೆ ಎಂಬುದನ್ನು ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಮಾತನಾಡಿದರು.

ಗ್ರಂಥಾಲಯ ಅಧಿಕಾರಿ ಕೃಷ್ಣಮೂರ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್ ಅನಂತರಾಜು ಪಿ ಡಿ ಓ ರವಿ, ಗ್ರಾಮ ಕೇಂದ್ರದ ಆಯೋಜಕಿ ಶುಭಮಿಲನ ಸೇರಿದಂತೆ ಹಲರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!