Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ಮಕ್ಕಳ ಆರೋಗ್ಯ ವಿಚಾರಣೆ

ಹಲ್ಲಿ ಬಿದ್ದಿದ್ದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಯಪುರ ವಿಚಾರಿಸಿದರು.

ಮಿಮ್ಸ್ ಆಸ್ಪತ್ರೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಉತ್ತಮ ಚಿಕಿತ್ಸೆ ನೀಡಿದ್ದು, ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಜಯರಾಮ್ ರಾಯಪುರ ತಿಳಿಸಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಜಿ.ಪಂ.ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಾಂತಾ ಎಲ್. ಹುಲ್ಮನಿ, ಉಪ ವಿಭಾಗಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ, ಮಿಮ್ಸ್ ನಿರ್ದೇಶಕ ಮಹೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಂಸದೆ ಸುಮಲತಾ ಅಂಬರೀಷ್ ಅವರು‌ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ‌, ಡಾ.ರವೀಂದ್ರ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!