Monday, May 6, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಹೊನ್ನಾವರ ಡೇರಿ ಅಧ್ಯಕ್ಷರಾಗಿ ಗೌಡೇಗೌಡ ಆಯ್ಕೆ

ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಹೊನ್ನಾವರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಬೆಂಬಲಿತರ ಬಣ ಜಯ ಸಾಧಿಸಿದ್ದು ಹೆಚ್.ಎಸ್.ಗೌಡೇಗೌಡ ಅಧ್ಯಕ್ಷರಾಗಿ, ಹೆಚ್.ಕೆ.ರಮೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಈ ಹಿಂದೆ ನಡೆದ ಸಂಘದ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಬೆಂಬಲಿಗರು ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧ ಆಯ್ಕೆಯಾದರು.

ನೂತನ ಅಧ್ಯಕ್ಷ ಗೌಡೇಗೌಡ ಮಾತನಾಡಿ, ಈ ಸ್ಥಾನವನ್ನು ನೀಡಿರುವ ನಮ್ಮ ಕೃಷಿ ಸಚಿವ ಚಲುವರಾಯಸ್ವಾಮಿ, ಗ್ರಾಮದ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ,  ಈ ಹಿಂದೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ಹೆಚ್.ಎಲ್. ಪುಟ್ಟರಾಜು ಮುಂದಾಳತ್ವದಲ್ಲಿ ತಾವು ಗೆಲುವು ಸಾಧಿಸಿದ್ದೇವು ಎಂದರು.ಉಪಾಧ್ಯಕ್ಷ ಕೆ ರಮೇಶ್ ಮಾತನಾಡಿ, ಎಲ್ಲರ ಸಹಕಾರಕ್ಕೆ ನನ್ನ ಧನ್ಯವಾದಗಳು ಎಂದರು

ಅಧ್ಯಕ್ಷ ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪುಟ್ಟರಾಜು, ನಮ್ಮ ನಾಯಕರಾದ ಚಲುವರಾಯಸ್ವಾಮಿ ಅವರ ಆಶೀರ್ವಾದ ಮತ್ತು ಕಾಂಗ್ರೆಸ್ ಮುಖಂಡರು ಹಾಗೂ ಹಾಲು ಉತ್ಪಾದಕರ ಸಂಘದ ಷೇರುದಾರರ ಸಹಕಾರದಿಂದಾಗಿ ಚುನಾವಣೆ ನಡೆದಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮದ ಕಾಂಗ್ರೆಸ್ ಮುಖಂಡರಾದ ಮಂಜೇಗೌಡ, ಪ್ರಕಾಶ್ ನರಸಿಂಹೇಗೌಡ, ಅಶೋಕ್,  ಸುರೇಶ್, ಇಂದ್ರಮ್ಮ, ರೇಣುಕಾ, ಲಲಿತಮ್ಮ, ಜಗದೀಶ್, ಮಂಜುನಾಥ, ದಿನೇಶ್, ನಾಗೇಶ್, ಲತಾ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!