ಮಂಡ್ಯ ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಪಿ.ರವಿಕುಮಾರ್ಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಹೊಸಬೂದನೂರಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಲಾಗಿದ್ದು,ಇದರಿಂ ರೈತರಿಗೆ ಮತ್ತಷ್ಟು ಅನುಕೂಲವಾಗಿದೆ ಎಂದರು.
ಹೊಸ ಬೂದನೂರಿನಲ್ಲಿ ಹೊಯ್ಸಳರ ಕಾಲದ ಶ್ರೀ ಅನಂತಪದ್ಮನಾಭ ದೇವಾಲಯ, ಕಾಶಿ ವಿಶ್ವನಾಥ ಹಾಗೂ ದೊಡ್ಡ ಕೆರೆ ಇದ್ದು, ಬೂದನೂರು ಉತ್ಸವ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಫೆಬ್ರವರಿಯಲ್ಲಿ ಉತ್ಸವ ನಡೆಯಲಿದ್ದು, ಇದಕ್ಕೆ ಸರ್ಕಾರಕ್ಕೆ ₹25 ಲಕ್ಷ ಪ್ರಸ್ತಾವನೆ ನೀಡಿದ್ದು, ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡುತ್ತದೆ ಎನ್ನುವುದರ ಮೇಲೆ ಉಳಿದ ಹಣವನ್ನು ಸಂಗ್ರಹಿಸಿ ಉತ್ಸವ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್.ಮಂಜು ಮಾತನಾಡಿ, ಸಂಸದೆ ಸುಮಲತಾ ಅಂಬರೀಷ್ ಅವರು ತಮ್ಮ ಅನುದಾನದಲ್ಲಿ ₹5 ಲಕ್ಷ ಹಾಗೂ ಅಪೆಕ್ಸ್ ಬ್ಯಾಂಕ್ನ ನಿರ್ದೇಶಕ ಅಶ್ವಥ್ ₹5.5 ಲಕ್ಷ ನೀಡಿದ್ದು, ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.
ಮನ್ಮುಲ್ ನಿರ್ದೇಶಕ ಯು.ಸಿ.ಶಿವಕುಮಾರ್(ಶಿವಪ್ಪ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಗೋಪಾಲಯ್ಯ, ನಿರ್ದೇಶಕರಾದ ಪಿ.ಎನ್.ರಘು, ಚಿಕ್ಕಬೋರಯ್ಯ, ಬಿ.ಎಲ್.ಲಿಂಗರಾಜು, ವಿ.ಎಸ್.ವಿದೀಪ್, ರಾಮರಾಜು, ಬಿ.ಸಿ.ರಾಜಶೇಖರ್, ಜಯಮ್ಮ, ರತ್ನಮ್ಮ ಭಾಗವಹಿಸಿದ್ದರು.