ದೇಶದ ಪ್ರತಿಯೊಬ್ಬರಿಗೂ ಸಹ ಮಾನವ ಹಕ್ಕುಗಳ ಅರಿವು ಅವಶ್ಯ, ಪ್ರತಿನಿತ್ಯದ ಜೀವನದಲ್ಲಿ ಕಾನೂನುಗಳ ಜೊತೆ ಜೀವನ ನಡೆಸುವ ನಾವು ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಿಕೊಳ್ಳಬೇಕೆಂದು ಡಾ.ಆನಂದಗೌಡ ತಿಳಿಸಿದರು.
ನೆಹರು ಯುವ ಕೇಂದ್ರ ಮಂಡ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಮಂಡ್ಯ ತಾಲ್ಲೂಕಿನ ಎಚ್.ಮಲ್ಲಿಗೆರೆ ಗ್ರಾಮದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಓದಬೇಕು, ಅದರಲ್ಲಿರುವ ಜ್ಞಾನ ಬಂಡಾರವನ್ನು ತಿಳಿದುಕೊಂಡಾಗ ಮಾತ್ರ ಸಾಧಕರಾಗಬಹುದು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ. ಜಿ.ಎನ್.ಮನುಕುಮಾರ್ ನೆಹರು ಯುವ ಕೇಂದ್ರದ ಹರ್ಷ ಮತ್ತಿತರು ಉಪಸ್ಥಿತರಿದ್ದರು