Thursday, September 19, 2024

ಪ್ರಾಯೋಗಿಕ ಆವೃತ್ತಿ

ಹಾಲಿನ ದರ ಹೆಚ್ಚಿಸದಿದ್ದರೆ ಪ್ರತಿಭಟನೆ : ಜೆಡಿಎಸ್

ಹಾಲು ಉತ್ಪಾದಕರಿಗೆ ಕೂಡಲೇ ಹಾಲಿನ ದರ ಹೆಚ್ಚಿಸದಿದ್ದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರ ರಘುನಂದನ್ ಎಂ.ಎಸ್ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ನಗರದಲ್ಲಿ ಸೋಮವಾರ ಮಾಧ್ಯಮರೊಂದಿಗೆ ಮಾತನಾಡಿದ ಅವರು, ಪಶು ಆಹಾರ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿರುವ ಸರ್ಕಾರ, ಹಾಲಿನ ದರ ಏರಿಕೆ ಮಾಡಲು ಹಿಂಜರಿಯುತ್ತಿದೆ ಎಂದು ದೂರಿದರು.

ಹಾಲಿನ ದರ ಹೆಚ್ಚಳ ಮಾಡುವಂತೆ ಮನ್ ಮುಲ್ ಗೆ ವಿವಿಧ ರೈತ ಪರ ಸಂಘಟನೆಗಳು ಮನವಿ ಸಲ್ಲಿಸಿದ್ದರೂ, ಏನು ಪ್ರಯೋಜನವಾಗಿಲ್ಲ, ಕೂಡಲೇ ದರ ಏರಿಕೆಗೆ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರ ಜೊತೆಗೂಡಿ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!