Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಕ್ರಮ ಮರಳು ಸಾಗಣೆ : ಚಾಲಕನ ಬಂಧನ

ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಕೆ.ಆರ್.ಪೇಟೆ ತಹಸೀಲ್ದಾರ್ ನಿಸರ್ಗಪ್ರಿಯ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಸುಮಾರಾಣಿ ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲು ಮಾಡಿದ ಘಟನೆ ಇಂದು ರಾತ್ರಿ ನಡೆದಿದೆ.

ಖಚಿತ ಮಾಹಿತಿ ಆಧರಿಸಿ ಮಿಂಚಿನ ಕಾರ್ಯಚರಣೆ ನಡೆಸಿ ಕೃಷ್ಣರಾಜಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ರಾಯಸಮುದ್ರ ಗ್ರಾಮದ ನವೀನ್ ಗೆ ಸೇರಿದ ಲಾರಿಯನ್ನು ಅಡ್ಡಗಟ್ಟಿ ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತಾಲೂಕಿನದ್ಯಂತ ಅಕ್ರಮವಾಗಿ ನಡೆಯುತ್ತಿರುವ ಮರಳು ದಂಧೆಯನ್ನು ಮಟ್ಟ ಹಾಕಲು ತಾಲ್ಲೂಕು ಆಡಳಿತ ಸಜ್ಜಾಗಿದ್ದು, ಮಾಹಿತಿ ನೀಡುವಂತೆ ತಹಶಿಲ್ದಾರ್ ನಿಸರ್ಗ ಪ್ರಿಯ ಜನರಲ್ಲಿ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!