ಸರ್ಕಾರಿ ಹಾಗೂ ಅನುದಾನಿತ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯಡಿ ಒಪಿಎಸ್ ಜಾರಿ ಮಾಡುವುದು ನಮ್ಮ ಸಂಕಲ್ಪ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಪರಿಣಾಮಕಾರಿ ಆಡಳಿತಕ್ಕಾಗಿ ಸರಕಾರದಲ್ಲಿ ಅನುಮೋದಿತ ಎಲ್ಲಾ ಹುದ್ದೆಗಳನ್ನು ಒಂದು ವರ್ಷದಲ್ಲಿ ನಾವು ಭರ್ತಿ ಮಾಡಲಿದ್ದೇವೆ. ಇದು ನಮ್ಮ ಸಂಕಲ್ಪ. ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ ಎಂದು ಕಾಂಗ್ರೆಸ್ ಹೇಳಿದೆ.
ಪೌರ ಕಾರ್ಮಿಕರು ಮತ್ತು ಬೀದಿ ವ್ಯಾಪಾರಿಗಳಿಗೆ ಕಾಂಗ್ರೆಸ್ ಭರವಸೆ ನೀಡಿದ್ದು, 25 ಸಾವಿರ ಪೌರ ಕಾರ್ಮಿಕರ ಸೇವೆ ಖಾಯಂ ಮಾಡಲಾಗುವುದು, 10 ಲಕ್ಷದ ವಿಮೆ ಯೋಜನೆ ಜಾರಿ, ಬೀದಿ ಬದಿ ವ್ಯಾಪಾರಿಗಳಿಗೆ 20 ಸಾವಿರ ರೂಪಾಯಿ ಒಂದು ಬಾರಿಯ ಅನುದಾನ ನೀಡಲಾಗುವುದೆಂದು ಕಾಂಗ್ರೆಸ್ ಭರವಸೆ ನೀಡಿದೆ.