Monday, May 6, 2024

ಪ್ರಾಯೋಗಿಕ ಆವೃತ್ತಿ

ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಗೌರವ : ರವೀಂದ್ರ ಶ್ರೀಕಂಠಯ್ಯ

ಭಾರತ ದೇಶದಲ್ಲಿ ಮಹಿಳೆಯರಿಗೆ ವಿಶೇಷ ಗೌರವ ಹಾಗೂ ಸ್ಥಾನಮಾನವಿದ್ದು,ಎಲ್ಲಿ ಮಹಿಳೆಯರನ್ನು ಗೌರವಿಸುತ್ತಾರೋ ಅಲ್ಲಿ ಶಾಂತಿ, ನೆಮ್ಮದಿ ನೆಲಸುತ್ತದೆ ಎಂದು  ಶ್ರೀರಂಗಪಟ್ಟಣ ಶಾಸಕ ಎ.ಎಸ್ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀರಂಗ ವೇದಿಕೆಯಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಉತ್ತಮ ಸ್ಥಾನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ‌ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಇರಲಿಲ್ಲ, ಪ್ರಸ್ತುತದಲ್ಲಿ ಮಹಿಳೆಯರಿಗೆ ಸರ್ಕಾರ ಅನೇಕ ರೀತಿಯ ಸವಲತ್ತುಗಳನ್ನು ಒದಗಿಸುತ್ತಿದೆ. ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು. ನವರಾತ್ರಿಯ ಹಬ್ಬದಲ್ಲಿ‌ ಎಲ್ಲಾ ಹೆಣ್ಣು ದೇವತೆಗಳನ್ನು ಪೂಜಿಸುವ ಪದ್ಧತಿ ಇದೆ. ಮಹಿಳಾ ದಸರಾ ಅರ್ಥ ಪೂರ್ಣವಾಗಿ ಆಚರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಜಿಲ್ಲಾಧಿಕಾರಿ ಎಸ್.ಅಶ್ವತಿ ಮಾತನಾಡಿ, ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಅಂಗವಾಗಿ ಸೆ.28ರಿಂದ ನಿರಂತರವಾಗಿ ಯುವದಸರಾ, ರೈತದಸರಾ, ಕ್ರೀಡಾ ದಸರಾ, ಮಹಿಳಾ ದಸರಾ ಹಾಗೂ ವಿವಿಧ ಕಾರ್ಯಕ್ರಮವನ್ನು ಶ್ರೀರಂಗವೇದಿಕೆಯಲ್ಲಿ ಆಯೋಜಿಸಲಾಗಿದೆ. ಎಲ್ಲರೂ ಉತ್ಸುಕರಾಗಿ ತೊಡಗಿಸಿಕೊಂಡೊದ್ದಾರೆ ಎಂದು ತಿಳಿಸಿದರು.

ಮಹಿಳಾ ದಸರಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿಸಂಘದ ಮಹಿಳೆಯರು ಭಾಗವಹಿಸಿರುವುದು ಬಹಳ ಸಂತಸ ತಂದಿದೆ. ರಂಗೋಲಿ ಸ್ಪರ್ಧೆ, ಮೆಹಂದಿ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಆನವರಣಗೊಳಿಸಬೇಕು. ಮಹಿಳೆಯರ ಪ್ರತಿಭೆ ಹಾಗೂ ಕಲೆ ಪ್ರದರ್ಶನಕ್ಕಾಗಿ ಮುಂದಿನ ದಿನಗಳಲ್ಲಿ ನಿಮಗೆ ಇನ್ನಷ್ಟು ಉತ್ತಮ ವೇದಿಕೆ ಕಲ್ಪಿಸುತ್ತೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆ ಹಾಗೂ ಮೆಹಂದಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಶ್ವೇತಾ, ಎನ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!