Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಡಾನೆ ದಾಳಿ ಪ್ರದೇಶಗಳಲ್ಲಿ ಸರ್ವೇ ನಡೆಸಿ ಪರಿಹಾರ ಕೊಡಿ : ಶಾಸಕರ ಸೂಚನೆ

ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಹೋಬಳಿಯಲ್ಲಿ ಕಾಡಾನೆ ದಾಳಿಯಿಂದ ರೈತರಿಗೆ ನಷ್ಟವಾಗಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಈಗ ನಷ್ಟಕ್ಕೊಳಗಾಗಿರುವ ಈ ಭಾಗಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಸರ್ವೇ ನಡೆಸಿ ಸೂಕ್ತ ಪರಿಹಾರ ಕಲ್ಪಿಸಿಕೊಡುವ ಕೆಲಸ ಮಾಡಬೇಕೆಂದು ಶಾಸಕರಾದ ದಿನೇಶ್‌ ಗೂಳಿಗೌಡ ಹಾಗೂ ಮಧು ಮಾದೇಗೌಡ ಅವರು ಸೂಚಿಸಿದ್ದಾರೆ.

ಚಿಕ್ಕರಸಿನಕೆರೆ ಹೋಬಳಿ ಭಾಗ ಸೇರಿದಂತೆ ಸುತ್ತಮುತ್ತಲಲ್ಲಿ ಎಲ್ಲೆಲ್ಲಿ ಆನೆಗಳ ದಾಳಿಯಾಗಿದೆಯೋ ಅಲ್ಲಿ ಎಲ್ಲ ಕಡೆ ಪರಿಶೀಲನೆ ನಡೆಸಿ, ನಷ್ಟದ ಪಟ್ಟಿ ಮಾಡಿ ಅವರೆಲ್ಲರಿಗೂ ಸೂಕ್ತ ಪರಿಹಾರವನ್ನು ಕಲ್ಪಿಸುವ ಕೆಲಸ ಮಾಡಬೇಕೆಂದು ಮಂಡ್ಯ ಜಿಲ್ಲಾ ಸಾಮಾಜಿಕ ಅರಣ್ಯಾಧಿಕಾರಿ ಸಿದ್ದು ಹಾಗೂ ಮೈಸೂರು ವಲಯ ಅರಣ್ಯಾಧಿಕಾರಿ ಮಾಲತಿಪ್ರಿಯ ಅವರಿಗೆ ಶಾಸಕರು ದೂರವಾಣಿ ಕರೆ ಮಾಡಿ ಸೂಚಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅರಣ್ಯಾಧಿಕಾರಿಗಳು, ಶೀಘ್ರವೇ ಭೇಟಿ ನೀಡಿ ಪರಿಹಾರ ನೀಡುವ ಕೆಲಸವನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಎಸ್‌.ಎಂ. ಕೃಷ್ಣ ಅವರಿಗೆ ಶುಭ ಕೋರಿಕೆ

ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಶಾಸಕಮಧು ಜಿ. ಮಾದೇಗೌಡ ಅವರು ಭೇಟಿ ಮಾಡಿ ಶುಭ ಕೋರಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!