ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭ ಸಂಕೀರ್ತನಾ ಯಾತ್ರೆ ನಡೆಯಲಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಲಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಶ್ರೀರಂಗಪಟ್ಟಣವು ಕೋಮು ಅತೀ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಡಿ.4 ರಂದು ಬೆಳಿಗ್ಗೆ 6 ಗಂಟೆಯಿಂದ ಡಿ.5 ರ ಬೆಳಿಗ್ಗೆ 6 ಗಂಟೆಯವರೆಗೆ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತರಹದ ಮದ್ಯದ ಅಂಗಡಿ, ಬಾರ್ ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ.