ಮಳವಳ್ಳಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಐಸೋಲೇಶನ್ ವಾರ್ಡ್ ಗೆ ಶಾಸಕ ಪಿಎಂ ನರೇಂದ್ರಸ್ವಾಮಿ ಉದ್ಘಾಟನೆ ಮಾಡಿದರು.
ನಂತರ ಮಾತನಾಡಿದ ಅವರು, ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು. ಮೊದಲಿನ ಕೋವಿಡ್ ನಂತೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ. ಆದರೆ 60 ವರ್ಷ ಮೇಲ್ಪಟ್ಟ ವಯಸ್ಕರು, ಬಾಣಂತಿಯರು, ಹೃದಯದ ಸಂಬಂಧಪಟ್ಟ ವ್ಯಕ್ತಿಗಳು ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕೆಂದು ಸಲಹೆ ನೀಡಿದರು. ನಂತರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಸಾರ್ವಜನಿಕ ಆಡಳಿತ ಅಧಿಕಾರಿ ಡಾ.ಸಂಜಯ್, ಡಾ. ಶಿವಕುಮಾರ್, ಡಾ.ಸತೀಶ್, ಡಾ.ಜ್ಯೋತಿ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಹಾಜರಿದ್ದರು.