Monday, May 6, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಹೆಬ್ಬಕವಾಡಿಯಲ್ಲಿ ನೂತನ ಶಾಲಾ ಕೊಠಡಿ ಉದ್ಘಾಟನೆ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಿರ್ಮಿಸಿರುವ ನೂತನ ಕೊಠಡಿಗಳನ್ನು ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಆಧುನಿಕ ಯುಗದಲ್ಲಿ ನಾಗರಿಕರ ಜನಜೀವನದ ಬದುಕು ಸುಧಾರಣೆಯತ್ತ ಸಾಗಿದೆ. ಅದಕ್ಕೆ ತಕ್ಕಂತೆ ಕೆಳಹಂತದಿಂದಲೇ ಶಿಕ್ಷಣಕ್ಕೆ ಬೇಕಾಗುವ ಮೂಲಭೂತ ಸೌಕರ್ಯ
ಗಳನ್ನು ಸಹ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದರು.

ಎಷ್ಟೇ ಖರ್ಚು ವೆಚ್ಚ ಬಂದರೂ ಬಡವರು, ಮಧ್ಯಮ ವರ್ಗದ ಮಕ್ಕಳೇ ಹೆಚ್ಚು ಕಲಿಯುವ ಸರ್ಕಾರಿ ಶಾಲೆಗಳಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಕಾಂಗ್ರೆಸ್ ಸರ್ಕಾರ ಕಟಿ ಬದ್ಧವಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಡಾ. ಶಿವಕುಮಾರ್ ಬಿರಾದಾರ, ಎಸ್’ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು, ಗ್ರಾಮದ ಮುಖಂಡರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!