ಕೆ.ಆರ್ ಎಸ್ ಜಲಾಶಯದಿಂದ ದೊಡ್ಡ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕಾವೇರಿ ನದಿಯಿಂದ ಪ್ರವಾಹ ಉಂಟಾಗುಬಹುದಾದ ಸ್ಥಳಗಳಿಗೆ ಶನಿವಾರ ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೆರೆ ಪರಿಸ್ಥಿತಿಯಿಂದ ಹಾನಿಯಾಗುವ ಪ್ರದೇಶಗಳಾದ ಶ್ರೀರಂಗಪಟ್ಟಣದ ಬೆಳಗೊಳ, ಪಶ್ಚಿಮ ವಾಹಿನಿ, ಬಲಮುರಿ, ಕರೇಕುರ, ಎಡಮುರಿಗೆ ಭೇಟಿ ನೀಡಿ ಅಧಿಕಾರಿಗಳು ಮಾಡಿಕೊಂಡಿರುವ ಸಿದ್ಧತೆ ಗಳ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.