Saturday, May 18, 2024

ಪ್ರಾಯೋಗಿಕ ಆವೃತ್ತಿ

ಚಂದ್ರಯಾನ-3 ಯಶಸ್ವಿ| ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಚಂದ್ರಯಾನ-3 ಯಶಸ್ವಿಯಾಗಿದ್ದು, ಚಂದ್ರನ ಮೇಲೆ ರೋವರ್ ಕಾರ್ಯಾಚರಣೆ ಆರಂಭಿಸಿದೆ. ಚಂದ್ರಯಾನವನ್ನು ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿದ್ದಾರೆ.

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಅಭಿನಂದಿಸಿದರು. ಅಲ್ಲಿನ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿ, ಸಿಹಿ ವಿತರಿಸಿ ಸಂತಸ ಹಂಚಿಕೊಂಡಿದ್ದಾರೆ.

“ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಯಶಸ್ವಿಯಾಗಿ ಇಳಿದಿದೆ. ಆ ಮೂಲಕ ಇಸ್ರೋ ಅಪೂರ್ವವಾದ ಸಾಧನೆ ಮಾಡಿದೆ. ಭಾರತೀಯರೆಲ್ಲರಿಗೂ ಇದು ಹೆಮ್ಮೆಯ ಕ್ಷಣ. ಈ ಅಸಾಧಾರಣ ಸಾಧನೆ ಮಾಡಿದ ಪ್ರತಿಯೊಬ್ಬ ವಿಜ್ಞಾನಿಗಳಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಾಹ್ಯಾಕಾಶ ವಿಜ್ಞಾನದ ಪ್ರಾರಂಭಕ್ಕೆ ಬೆಂಬಲ ಮತ್ತು ನೆರವು ನೀಡಿದ್ದ ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರನ್ನು ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ” ಎಂದು ಅವರು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!