Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ದೇವಾಲಯ ಜೀರ್ಣೋದ್ಧಾರಕ್ಕೆ ಚೆಕ್ ವಿತರಣೆ

ಕೆ ಆರ್ ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಳೇಗೌಡನಕೊಪ್ಪಲು ಗ್ರಾಮದ ಮಾರಮ್ಮನ ದೇವಾಲಯದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಿಡುಗಡೆಯಾಗಿದ್ದ 1 ಲಕ್ಷ ರೂ.ಚೆಕ್ ಅನ್ನು  ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ವಿತರಿಸಿದರು
ಚೆಕ್ ಸ್ವೀಕರಿಸಿದ ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ವರದರಾಜೇಗೌಡ ಮಾತನಾಡಿ, ದೇವಾಲಯಗಳ ಜೀರ್ಣೋದ್ಧಾರಕ್ಕೆ, ಹಾಲಿನ ಡೇರಿಗಳ ನೂತನ ಕಟ್ಟಡಕ್ಕೆ ಧನ ಸಹಾಯ, ಕೆರೆಗಳ ಅಭಿವೃದ್ಧಿ, ಮದ್ಯವ್ಯರ್ಜನ ಶಿಬಿರ, ಉನ್ನತ ವ್ಯಾಸಂಗಕ್ಕೆ ಅರ್ಥಿಕ ನೆರವು, ಕಡಿಮೆ ಬಡ್ಡಿ ದರದಲ್ಲಿ ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ಸಾಲ ನೀಡುವ ಮೂಲಕ ಕುಟುಂಬದ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮಹಿಳೆಯರಿಗೆ ಧರ್ಮಸ್ಥಳ ಯೋಜನೆ ವಿಶೇಷವಾಗಿ ಅನುಕೂಲ ಮಾಡಿಕೊಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ವೀರೇಶಪ್ಪ, ಮಮತಾ ಶೆಟ್ಟಿ, ಸಂಸ್ಥೆಯ ಮೇಲ್ವಿಚಾರಕಿ ಗುಣಶ್ರೀ, ಸೇವಾ ಪ್ರತಿನಿಧಿ ರಾಣಿ, ಕುಮಾರ್, ಮಹದೇವ್, ರವಿಚಂದ್ರ, ಮಹಾದೇವ, ಲೋಕೇಶ್, ಪ್ರವೀಣ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!