ಶ್ರೀರಂಗಪಟ್ಟಣ ತಾಲ್ಲೂಕಿನ ಜನವಾದಿ ಮಹಿಳಾ ಸಂಘಟನೆ ಸಮಿತಿ ನೇತೃತ್ವದಲ್ಲಿ ಮಹದೇವಪುರ ಗ್ರಾಮದಲ್ಲಿ ಜನವಾದಿ ಮಹಿಳಾ ಸಂಘಟನಾ ಸದಸ್ಯತ್ವ ಆಂದೋಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟದ ಎಲ್ಲಾ ಮಹಿಳೆಯರು ಸದಸ್ಯತ್ವ ಪಡೆದರು.
ಇಡೀ ರಾಜ್ಯಾದ್ಯಂತ ಎರಡು ದಿನಗಳು ಸದಸ್ಯತ್ವ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಹಿಳೆಯರು ಸದಸ್ಯತ್ವ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುಶೀಲ ತಿಳಿಸಿದರು.
ಕಾರ್ಯಕ್ರಮದಲ್ಲಿ ಜನವಾದಿ ಮಹಿಳಾ ಸಂಘಟನೆಯ ಶ್ರೀರಂಗಪಟ್ಟಣ ತಾಲ್ಲೂಕು ಸಮಿತಿ ಉಪಾಧ್ಯಕ್ಷೆ ಪ್ರೇಮ, ಸಂಜೀವಿನಿ ಮಹಿಳಾ ಒಕ್ಕೂಟದ ಕೃಷ್ಣವೇಣಿ , ಲಕ್ಷ್ಮಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದಾರೆ.