ಕಾವೇರಿ ಸಂಕಷ್ಟಕ್ಕೆ ಸ್ಪಂದಿಸದೆ ಲೋಕಸಭಾ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ವಿರುದ್ಧ ಜಯಕರ್ನಾಟಕ ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ನಗರದ ಸುಮ ರವಿ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರು ಬಂದಿದ್ದಾರೆ ಎಂಬ ಮಾಹಿತಿ ತಿಳಿದು ಅಲ್ಲಿಗೆ ಬಂದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಸಚಿವರಾದ ಚಲುವರಾಯಸ್ವಾಮಿ ,ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯ
ಹೊರಗೆ ಜಯ ಕರ್ನಾಟಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಕಾವೇರಿ ನೀರು ಬಿಡಲ್ಲ ಅಂತಾರೆ.ನಿತ್ಯವೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಆದರೆ ಸಚಿವರು, ಶಾಸಕರು ಲೋಕಸಭಾ ಚುನಾವಣೆ ಬಗ್ಗೆ ಚಿಂತನೆ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಯೋಗಣ್ಣ ಸೇರಿದಂತೆ ಹಲವರಿದ್ದರು.