Wednesday, May 22, 2024

ಪ್ರಾಯೋಗಿಕ ಆವೃತ್ತಿ

ಜೆಡಿಎಸ್ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಲು ಮನವಿ

ಕೆ.ಆರ್.ಪೇಟೆ ತಾಲ್ಲೂಕಿನ ಪ್ರತಿ ಹೋಬಳಿಗಳಲ್ಲಿ ಬರುವ ಪ್ರತಿಯೊಂದು ಗ್ರಾಮಗಳಲ್ಲಿ ನಮ್ಮ ಪಕ್ಷದ
ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಹೆಚ್ ಟಿ ಮಂಜು ಅವರ ಗೆಲುವಿಗೆ ಶ್ರಮಿಸಬೇಕೆಂದು ತಾಲೂಕು ಜೆಡಿಎಸ್
ಘಟಕದ ಅಧ್ಯಕ್ಷ ಎ.ಎನ್.ಜಾನಕೀರಾಂ ಮನವಿ ಮಾಡಿದರು.

ಕೆ.ಆರ್.ಪೇಟೆ ತಾಲೂಕು ಪರಿಶಿಷ್ಟ ಜಾತಿ ಜೆಡಿಎಸ್ ವಿಭಾಗದ ವತಿಯಿಂದ ಎಲ್ಲಾ ಹೋಬಳಿ ಘಟಕದ ಅಧ್ಯಕ್ಷರ ಆಯ್ಕೆ ಸಂಬಂಧ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ನಡೆದ ಜೆಡಿಎಸ್ ಎಸ್ಸಿ ಘಟಕದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೆಡಿಎಸ್ ಪಕ್ಷದ ಮಹತ್ವದ ಪಂಚರತ್ನ ಯೋಜನೆಗಳು ಹಾಗೂ ಕುಮಾರಣ್ಣ ಅವರು ಎರಡು
ಭಾರಿ ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು. ಎಸ್ಸಿ ಘಟಕದ ಅಧ್ಯಕ್ಷ ಹರಿಹರಪುರ ನರಸಿಂಹ ಅಧ್ಯಕ್ಷತೆ ವಹಿಸಿದ್ದರು.

ಹೋಬಳಿ ಘಟಕದ ಅಧ್ಯಕ್ಷರ ಆಯ್ಕೆ

ಕಸಬಾ ಹೋಬಳಿ ಘಟಕದ ಅಧ್ಯಕ್ಷರಾಗಿ ಕತ್ತರಘಟ್ಟ ಸಿದ್ದರಾಜು, ಶೀಳನೆರೆ ಹೋಬಳಿ ಘಟಕದ ಅಧ್ಯಕ್ಷರಾಗಿ ಕಾಗೆಪುರ ವೆಂಕಟೇಶ್, ಸಂತೆಬಾಚಹಳ್ಳಿ ಹೋಬಳಿ ಘಟಕದ ಅಧ್ಯಕ್ಷರಾಗಿ ಸಿಂಗಾಪುರ ಯೋಗೇಶ್, ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷರಾಗಿ ತೆಂಗಿನಘಟ್ಟ ಮಹೇಶ್, ಬೂಕನಕೆರೆ ಹೋಬಳಿ ಘಟಕದ ಅಧ್ಯಕ್ಷರಾಗಿ ಗ್ರಾ.ಪಂ.ಸದಸ್ಯ ಮಾಚಗೋನಹಳ್ಳಿ ಯೋಗೇಶ್,ಅಕ್ಕಿಹೆಬ್ಬಾಳು ಹೋಬಳಿ ಘಟಕದ ಅಧ್ಯಕ್ಷರಾಗಿ ಚನ್ನಕೃಷ್ಣ ಹಾಗೂ ಕೆ.ಆರ್. ಪೇಟೆ ಟೌನ್ ಅಧ್ಯಕ್ಷರಾಗಿ ಅಂಬೇಡ್ಕರ್ ನಗರ ಗಣೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಂಡಿಹೊಳೆ ಕೃಷ್ಣಮೂರ್ತಿ ಅವರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಸಿಂಧಘಟ್ಟ ಸೋಮಸುಂದರ್,ಪುರಸಭಾ ಮಾಜಿ ಸದಸ್ಯ ಹೊಸಹೊಳಲು ಗಂಟೆ ಗೋಪಾಲ್, ಕಾಗೆಪುರ ಸೋಮಶೇಖರ್, ಬಂಡಿಹೊಳೆ ಎನ್.ಜೆ. ರಮೇಶ್, ಚಟ್ಟೇನಹಳ್ಳಿ ರಾಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!