ವರದಿ : ಪ್ರಭು ವಿ.ಎಸ್.
ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಹೋಬಳಿಯ ಜೆಡಿಎಸ್ ಕಾರ್ಯಕರ್ತರು, ಮುಖಂಡರು ನೂರಾರು ದ್ವಿಚಕ್ರ ವಾಹನಗಳ ಮೂಲಕ ಬೈಕ್ ರ್ಯಾಲಿ ನಡೆಸಿ ಶಾಸಕ ಸುರೇಶ್ಗೌಡ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ತಾಲೂಕಿನ ಕೊಪ್ಪ ಜಿ.ಪಂ ವ್ಯಾಪ್ತಿಯ ಬೆಕ್ಕಳಲೆ, ಕಿರಂಗೂರು, ಬಿದರಕೋಟೆ, ತಗ್ಗಹಳ್ಳಿ, ಕೀಳಘಟ್ಟ, ಕೋಣಸಾಲೆ, ಚಿಕ್ಕೋನಹಳ್ಳಿ ಇನ್ನಿತರೆ ಗ್ರಾಮಗಳಲ್ಲಿ ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಶಾಸಕ ಸುರೇಶ್ಗೌಡ ಅವರ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸುವಂತೆ ಘೋಷಣೆಗಳನ್ನು ಕೂಗಿದರು.
ತಾಲೂಕಿನ ಬೆಕ್ಕಳಲೆ ಗ್ರಾಮದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಜೆಡಿಎಸ್ ಯುವ ಮುಖಂಡ ಕೋಣಸಾಲೆ ಮಧು ಕೊಪ್ಪ ಹೋಬಳಿ ವ್ಯಾಪ್ತಿಯ 8 ಪಂಚಾಯಿತಿಗಳ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ತೆರಳಿ ಸುರೇಶ್ಗೌಡ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು
ಕೊಪ್ಪ ಹೋಬಳಿಯಲ್ಲಿ ಶಾಸಕರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು ಕುಡಿಯುವ ನೀರು, ನಾಲಾ ಆಧುನೀಕರಣ, ಶಾಲಾ, ಕಾಲೇಜು ನಿರ್ಮಾಣ ಆರೋಗ್ಯ ಇನ್ನಿತರೆ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಿ ಮಾದರಿ ಕ್ಷೇತ್ರವನ್ನಾಗಿಸಿದ್ದು ಈ ಭಾರಿ ಅತ್ಯಧಿಕ ಮತಗಳಿಂದ ಜಯಶೀಲರಾಗುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಜೆಡಿಎಸ್ ಉಪಾಧ್ಯಕ್ಷರಾದ ಬಿದರಕೋಟೆ ಕುಶ, ಪ್ರದೀಪ್ಕುಮಾರ್, ತಾ.ಪಂ. ಮಾಜಿ ಅಧ್ಯಕ್ಷೆ ಲಕ್ಷ್ಮೀ ಚನ್ನರಾಜು, ಮುಖಂಡರಾದ ಸಂಗೀತ, ಸುನೀತ, ಶಂಕರ್, ಚನ್ನಪ್ಪ, ದೊಡ್ಡೋನು ಇತರರಿದ್ದರು.