ಮಂಡ್ಯ ನಗರದ ರೈತ ಸಭಾಂಗಣದ ಆವರಣದಲ್ಲಿ ಆ.18ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ರಾಮಕೃಷ್ಣ ಕೆ.ಎಂ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಕಾಂಗ್ರೆಸ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಈ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, ಸುಮಾರು 40ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗವಹಿಸಲಿವೆ ಎಂದರು.
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ, ಐಟಿಐ, ಪದವಿ, ಸ್ನಾತಕೋತ್ತರ ಪದವಿ ಪಡೆದ 18ರಿಂದ 35ರ ವಯೋಮಾನದ ಯುವಕ ಯುವತಿಯರು ಮೇಳದದಲ್ಲಿ ಭಾಗವಹಿಸಬಹುದು ಎಂದರು. ನೋಂದಣಿ ಉಚಿತವಾಗಿ ಅಂದು ಸ್ಥಳದಲ್ಲೇ ನೋಂದಾಯಿಸಿಕೊಳ್ಳಬಹುದು ಎಂದು ವಿವರಿಸಿದರು.
ಶಾಸಕರಿಗೆ ಅಭಿನಂದನೆ
ಇದೇ ಸಂದರ್ಭದಲ್ಲಿ ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರನ್ನು ಅಭಿನಂದಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಕರಿಯಪ್ಪಚಾರಿ, ಉಮ್ಮಡಹಳ್ಳಿ ನಾಗೇಶ್, ಶಿವರುದ್ರ, ಯೋಗೇಶ್, ಸಂಪಳ್ಳಿ ದೇವರಾಜು, ನಾಗೇಶ್, ಕೃಷ್ಣ ಹಾಗೂ ಚಿಕ್ಕಸ್ವಾಮಿ ಉಪಸ್ಥಿತರಿದ್ದರು.