ಕರ್ನಾಟಕ ಲೋಕಾಯುಕ್ತ ಇಲಾಖೆಯ ಉಪಲೋಕಯುಕ್ತರಾದ ನ್ಯಾಯಮೂರ್ತಿ ಕೆ.ಎನ್ ಪಣೀಂದ್ರ ರವರು ಜೂನ್ 04 ರಂದು ಬೆಳಿಗ್ಗೆ 11;30 ರಿಂದ ಮಧ್ಯಾಹ್ನ 1:30 ರವರೆಗೆ ಹಾಗೂ ಮ. 2:30 ರಿಂದ ಸಂಜೆ 3:30 ರವರೆಗೆ ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸ ವಿಳಂಬವಾಗಿದ್ದಲ್ಲಿ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೇ, ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು.
ಜೂನ್ 06 ರಂದು ಬೆ. 10 ಗಂಟೆಯಿಂದ ಮದ್ಯಾಹ್ನ 1:30 ರವರೆಗೆ ಮಂಡ್ಯ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ( ಉಪ ಲೋಕಾಯುಕ್ತರ ಕಾರ್ಯ ವ್ಯಾಪ್ತಿಗೆ ಒಳಪಡುವ) ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಿದ್ದಾರೆ.
ದೂರುದಾರರು ನಿಗಧಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಇಲಾಖೆ ಮಂಡ್ಯ ವಿಭಾಗದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.