ವರದಿ: ಪ್ರಭು ವಿ ಎಸ್
ಮದ್ದೂರು ತಾಲ್ಲೂಕಿನ ಕೆ ಹೊನ್ನಲಗೆರೆ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆರ್ ಬಿ ಅಪ್ಪಾಜಿ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ಧಾರೆ.
ಈ ಹಿಂದಿನ ಅಧ್ಯಕ್ಷ ಕೃಷ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಆರ್ ಬಿ ಅಪ್ಪಾಜಿ ಗೌಡ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಆಶಾ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್ ಬಿ ಅಪ್ಪಾಜಿಗೌಡ ಅವರನ್ನು ಸಂಘದ ನಿರ್ದೇಶಕರು ಹಾಗೂ ಸ್ಥಳೀಯ ಮುಖಂಡರು ಅಭಿನಂದಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು, ತಮ್ಮನ್ನು ಅಧ್ಯಕ್ಷರನ್ನಾಗಿಸಲು ಶ್ರಮಿಸಿದ ಸಂಘದ ನಿರ್ದೇಶಕರಿಗೆ ಹಾಗೂ ಸ್ಥಳೀಯ ಮುಖಂಡರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಮುಂದಿನ ದಿನಗಳಲ್ಲಿ ರೈತರಿಗೆ ಸಂಘದ ವತಿಯಿಂದ ಸಿಗುವ ಹಲವು ಸೌಲಭ್ಯಗಳನ್ನು ಸಕಾಲದಲ್ಲಿ ದೊರಕಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಈಗಾಗಲೇ ರೈತರಿಗೆ ಕ್ರಿಮಿನಾಶಕ, ಬಿತ್ತನೆಗೆ ಬೀಜ, ರಸಗೊಬ್ಬರ, ಇನ್ನಿತರ ಪರಿಕರಗಳನ್ನು ವಿತರಿಸಲು ಕ್ರಮವಹಿಸಲಾಗುವುದೆಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸಣ್ಣಮ್ಮ, ನಿರ್ದೇಶಕರಾದ ಕೃಷ್ಣೆಗೌಡ, ಕೆಂಪೇಗೌಡ, ತಿಬ್ಬೇಗೌಡ, ಚೆನ್ನವೀರಯ್ಯ, ದೇವರಾಜು, ಮಾದಯ್ಯ, ಚೆನ್ನಮ್ಮ, ಪುಟ್ಟ, ಮಾದಯ್ಯ , ಎಚ್ ಡಿ ಮಲ್ಲಿಕಾರ್ಜುನ್ , ಮುಖಂಡರಾದ ಎಚ್ ಬಿ ಪುಟ್ಟಸ್ವಾಮಿ, ಆರ್ ಸಿ ಎಸ್ ಮಹೇಶ್ , ಮುತ್ತುರಾಜು, ಮುತ್ತರಾಜು, ಶಿವರಾಮು, ಸ್ವಾಮಿ, ಶಿವಕುಮಾರ್, ಜವರಾಯಿ , ಪುಟ್ಟ, ಲಿಂಗ ಹಾಗೂ ರಾಮಣ್ಣ ಇತರರಿದ್ದರು.