ಕೆ ಆರ್ ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಾಲಯದ ಬಳಿ ಪ್ರವಾಸಕ್ಕೆ ಬಂದಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಹರೀಶ್ 32, ನಂಜುಂಡ,25, ಜ್ಯೋತಿ 18 ಮೃತ ದುರ್ದೈವಿಗಳು.
ಮೈಸೂರಿನಿಂದ ಪ್ರವಾಸಕ್ಕೆ ಬಂದಿದ್ದ ಇವರು, ಎನ್ಜಿಒ ಕಡೆಯಿಂದ 25ಕ್ಕೂ ಹೆಚ್ಚು ಜನರ ತಂಡದಲ್ಲಿ ಪ್ರವಾಸಕ್ಕೆ ಬಂದಿದ್ದರು. ಹಿನ್ನೀರಿನಲ್ಲಿ ಈಜುವ ವೇಳೆ ದುರ್ಘಟನೆ ಸಂಭವಿಸಿದೆ.
ಕೆ ಆರ್ ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪಿಎಸ್ಐ ಬಸವರಾಜ್ ಸೇರಿದಂತೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.