ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ.27ರಂದು ಮಧ್ಯಾಹ್ನ 3 ಗಂಟೆಗೆ ಪಾಂಡವಪುರ ತಾಲ್ಲೂಕಿನ ಹೊಸ ಕನ್ನಂಬಾಡಿ, ಕೆ.ಆರ್.ಎಸ್.ಹಿನ್ನೀರು ಪ್ರದೇಶದ ವೇಣುಗೋಪಾಲ ಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆ ವಹಿಸುವರು. ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ ಸಿ.ನಾರಾಯಣ ಗೌಡ, ಪ್ರವಾಸೋದ್ಯಮ ಹಾಗೂ ಪರಿಸರ ಸಚಿವ ಆನಂದ್ ಸಿಂಗ್ ಉಪಸ್ಥಿತರಿರುವರು.
ಪ್ರವಾಸೋದ್ಯಮದ ವಿಶೇಷ ಭಾಷಣವನ್ನು ಜಿಲ್ಲಾಧಿಕಾರಿ ಎಸ್.ಅಶ್ವತಿ ಮಾಡುವರು. ಸಾಹಿತಿ ಹಾಗೂ ಇತಿಹಾಸ ತಜ್ಞ ಮಹಮ್ಮದ್ ಕಲೀಂಉಲ್ಲಾ ವಿಶೇಷ ಉಪನ್ಯಾಸ ನೀಡುವರು.ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ ತಮ್ಮಣ್ಣ, ಸುರೇಶ್ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಕಟ್ಟೇರಿ ಗ್ರಾ.ಪಂ. ಅಧ್ಯಕ್ಷರಾದ ವಿ.ಸುಮಪ್ರವೀಣ್, ಕಟ್ಟೇರಿ ಗ್ರಾ. ಪಂ. ಉಪಾಧ್ಯಕ್ಷ ಲೋಕೇಶ್ ಪಾಲ್ಗೊಳ್ಳುವರು.