Thursday, September 19, 2024

ಪ್ರಾಯೋಗಿಕ ಆವೃತ್ತಿ

ಯಡಿಯೂರಪ್ಪ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ ನಿಧನ

ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು ದಿನಗಳಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.

2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು.

ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇಂದು ಸಂಜೆ 4 ಗಂಟೆಗೆ ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ.

ಇತ್ತೀಚಿಗಷ್ಟೇ ಬಿಎಸ್ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!