Thursday, September 19, 2024

ಪ್ರಾಯೋಗಿಕ ಆವೃತ್ತಿ

ಯೋಗದಿಂದ ಆರೋಗ್ಯ ವೃದ್ಧಿಸಿಕೊಳ್ಳಬಹುದು – ಕದಲೂರು ಉದಯ್

ಇಂದಿನ ಕಲುಷಿತ ಆಹಾರಗಳಿಂದ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಯೋಗದಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎಂದು ಶಾಸಕ ಕದಲೂರು ಉದಯ್ ಹೇಳಿದರು.

ಮದ್ದೂರು ತಾಲೂಕಿನ ಕೆಎಂ ದೊಡ್ಡಿಯ ಜನನಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ದಿನ ಹಾಗೂ ವಿವೇಕಾನಂದ ಯೋಗ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಶೇ.95ರಷ್ಟು ಮಂದಿ ಹಣ, ಆಸ್ತಿ ಸಂಪಾದನೆ ಮಾಡುವ ಚಿಂತನೆಯಲ್ಲಿ ಕಾಲ ಕಳೆಯುವ ಜನರಿದ್ದಾರೆ. ಆದರೆ ಆರೋಗ್ಯದ ಬಗ್ಗೆ ಗಮನವಹಿಸುವುದು ಕಡಿಮೆಯಾಗಿದೆ. ಯೋಗದಿಂದ ಆರೋಗ್ಯ ವೃದ್ಧಿಸುತ್ತದೆ ಎಂದರು.

ನುದಿ

ಇದೆ ವೇಳೆ ಭಾರತಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಬಿ ಎಂ ನಂಜೇಗೌಡ, ನಿವೃತ್ತ ಉಪನ್ಯಾಸಕರಾದ ರಾಗಿಣಿ ನಂಜೇಗೌಡ ಹಾಗೂ ಶಾಸಕ ಕದಲೂರು ಉದಯ್ ಅವರನ್ನು ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು.

ಸಂಸ್ಥೆಯ  ಮಾಜಿ ಅಧ್ಯಕ್ಷ ಎಸ್ ಲಿಂಗಯ್ಯ, ಗಾಯಿತ್ರಿ, ರಾಜೀವ್, ಜನನಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿಕೆ ಜಗದೀಶ್, ಮುಖ್ಯ ಶಿಕ್ಷಕಿ ಸೌಮ್ಯ ಜಗದೀಶ್, ಹನುಮೇಗೌಡ, ಶಿವಕುಮಾರ್ ಸೇರದಂತೆ ಹಲವರು ಉಪಸ್ಥಿತರಿದ್ದರು. ಯೋಗ ಗುರು ಮಲ್ಲಿಕಾರ್ಜುನ ಸ್ವಾಮಿ ಅವರು ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!