ಮಂಡ್ಯನಗರದ ಕಾಳಿಕಾಂಭ ದೇವಾಲಯದಲ್ಲಿ ಬಿಜೆಪಿ ವತಿಯಿಂದ ಅಶ್ವಕ್ಕೆ ಪೂಜೆ ಸಲ್ಲಿಸಲಾಯಿತು.
ದ್ವಾಪರಯುಗದಲ್ಲಿ ಕೃಷ್ಣನು ಅರ್ಜುನನಿಗೆ ಅಶ್ವಮೇಧದ ಕುದುರೆಯ ಸಾರಥ್ಯವನ್ನು ವಹಿಸುವಂತೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿಯು ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಷಾ ಅವರಿಗೆ ಪಕ್ಷದ ನಾಯಕರು ಸಾರಥ್ಯವನ್ನು ವಹಿಸಬೇಕೆನ್ನುವ ಉದ್ಧೇಶದಿಂದ ಈ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಶಿವಕುಮಾರಾಧ್ಯ ತಿಳಿಸಿದರು.
ರಾಜ್ಯದಲ್ಲಿ ಕಾರ್ಯಕರ್ತರ ಇಚ್ಚೆಯಂತೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.