ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಸಿ.ಮರಿಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದರು.
ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಚಲ್ಲಿಗರಾಮು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿದ್ದರಿಂದ ನೂತನ ಅಧ್ಯಕ್ಷರಾಗಿ ಸಿ.ಮರಿಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿರುವ ಬಗ್ಗೆ ಚುನಾವಣಾಧಿಕಾರಿಯಾಗಿದ್ದ ತಾ.ಪಂ ಇಓ ಹೆಚ್.ಜಿ ಶ್ರೀನಿವಾಸ್ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಸಿ. ಮರಿಸ್ವಾಮಿ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಪಂಚಾಯಿತಿ ಅಭಿವೃದ್ದಿ ದೃಷ್ಠಿಯಿಂದ ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಒಂದುಗೂಡಿ ಅಧ್ಯಕ್ಷ ಸ್ಥಾನವನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ, ತನ್ನನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರು ಹಾಗೂ ಗ್ರಾಮದ ಮುಖಂಡರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ, ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಸರ್ವಂಗೀಣ ಅಭಿವೃದ್ದಿಗೆ ಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ಚಿಕ್ಕಮೊಗಣ್ಣ, ಸ್ವಾಮಿ, ಕೆ. ಚನ್ನಿಗರಾಮು, ನವೀನ್ ಅರಸು, ಜಯಮ್ಮ, ಪುಟ್ಟರಾಜು, ಗೌರಮ್ಮ, ಚಿಕ್ಕಹೈದೇಗೌಡ, ರಾಧ ಮುಖಂಡರಾದ ಕುಳ್ಳಚನ್ನಂಕಯ್ಯ, ಸೋಮಣ್ಣ, ಶಿವಮಾಧು, ಚಂದನ್, ಶ್ರೀನಿವಾಸ್, ಲಿಂಗರಾಜು, ಚನ್ನಿಗರಾಮು, ನಾಗರಾಜು, ವೀರೇಶ್, ಸೇರಿದಂತೆ ಇತರರು ಇದ್ದರು.