Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಮ ಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಒತ್ತಾಯ

ನಾಮ ಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸುವಂತೆ ಆದೇಶ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಕನ್ನಡ ಸೇನೆ ಕಾರ್ಯಕರ್ತರು ಕಂದಾಯ ಸಚಿವ ಆರ.ಅಶೋಕ್ ಅವರನ್ನು ಒತ್ತಾಯಿಸಿದರು.

ಮಂಡ್ಯ ನಗರದ ಪೋಲಿಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಅಶೋಕ್ ಅವರನ್ನು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಭೇಟಿ ಮಾಡಿ, ಮಂಡ್ಯ ನಗರದ ವರ್ತಕರು ಹಾಕುವ ನಾಮಪಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೆ ಮಂಡ್ಯದ ಕಲಾಮಂದಿರವನ್ನು ಆಧುನಿಕವಾಗಿ ನವೀಕರಣ ಮಾಡಬೇಕೆಂದು ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ,ಬಿಜೆಪಿ ಮುಖಂಡ ಶ್ರೀಧರ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!