ಕನ್ನಡ ಸೇನೆ ಕರ್ನಾಟಕ, ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಡಿ.16 ರಂದು ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ಜಾಗೃತಿ ಸಮಾವೇಶವು ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.
ಡಿ. 16 ರಂದು ಬೆಳಿಗ್ಗೆ 10 ಗಂಟೆಗೆ ಮಜಾ ಭಾರತ ಖ್ಯಾತಿಯ ಸುಶ್ಮಿತಾ,ಜಗ್ಗಪ್ಪ ರಾಘವೇಂದ್ರ ಅವರು ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಗಾಂಧಿ ಭವನದವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ.
ಗಾಂಧಿ ಭವನದಲ್ಲಿ 11 ಗಂಟೆಗೆ ನಾಡಿನ ಪ್ರಸಿದ್ಧ ಚಿಂತಕರು, ಖ್ಯಾತ ನಿರ್ದೇಶಕರಾದ ಟಿ. ಎನ್. ಸೀತಾರಾಮ್ ಕನ್ನಡ ರಾಜ್ಯೋತ್ಸವ ಹಾಗೂ ಜಾಗೃತಿ ಸಮಾವೇಶ ಉದ್ಘಾಟನೆ ಮಾಡಲಿದ್ದ, ಸಾಹಿತಿಗಳಾದ ವಸುಂಧರಾ ಭೂಪತಿ,ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ. ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ,ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು, ಹೆಚ್.ಎನ್ ಯೋಗೇಶ್, ಮಜಾ ಭಾರತ ಖ್ಯಾತಿಯ ಸುಶ್ಮಿತಾ, ಜಗ್ಗಪ್ಪ, ರಾಘವೇಂದ್ರ, ಮಿಮಿಕ್ರಿ ಗೋಪಿ ಭಾಗವಹಿಸಿ ಹಾಸ್ಯ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ.
ಕನ್ನಡಾಭಿಮಾನಿಗಳು,ಜನತೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.