ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ನೀಡುವ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಮಂಡ್ಯದ ಗಾಯಕಿ ಮೀನಾಕ್ಷಿ ಅವರು ಆಯ್ಕೆಯಾಗಿದ್ದಾರೆ.
ಮೀನಾಕ್ಷಿ ಅವರು ಗಾಯಕರಾಗಿದ್ದು ಹತ್ತು ಹಲವು ಕಾರ್ಯಕ್ರಮಗಳಲ್ಲಿ ಗಾಯನ ಮಾಡುವುದರ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ನಿರತರಾಗಿದ್ದಾರೆ. ಇವರ ಕಲಾಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಡಿ.10ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಹೆಚ್.ಎಲ್.ಯಮುನಾ ತಿಳಿಸಿದ್ದಾರೆ.