Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಕರ್ನಾಟಕ ಬಂದ್ ಗೆ ರೈತಸಂಘ ಬೆಂಬಲ

ರಾಜ್ಯ ಸರ್ಕಾರ ನಿರ್ಲಕ್ಷ್ಯ ಹಾಗೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಕಾವೇರಿ ಪ್ರಾಧಿಕಾರದ ಅನ್ಯಾಯ ಖಂಡಿಸಿ, ನಾಳಿನ ‘ಕರ್ನಾಟಕ ಬಂದ್’ ನಾಗಮಂಗಲ ರೈತಸಂಘ (ಮೂಲ ಸಂಘಟನೆ) ಬೆಂಬಲ ಸೂಚಿಸಿದೆ ಎಂದು ಸಂಘದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಿಂದ ಟಿ. ಮರಿಯಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟಿಸಲಾಗುವುದು. ಕಾಂಗ್ರೆಸ್ ಸರ್ಕಾರ ಮೇಕೆದಾಟು ಯೋಜನೆ ಮೂಲಕ ಅಧಿಕಾರಕ್ಕೆ ಬಂದು, ಒಂದು ವರ್ಷದ ಸಂಭ್ರಮವನ್ನು ಆಚರಿಸುತ್ತದೆ, ಆದರೆ ರೈತರ ಹಿತವನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ದೂರಿದರು.

ರೈತಸಂಘದ ಸಹಾಯಕ ಕಾರ್ಯದರ್ಶಿ ಸಿದ್ದಲಿಂಗಪ್ಪ, ಖಜಾಂಚಿ ಬೋರೇಗೌಡ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!