Thursday, September 19, 2024

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಡ್ಯ ತಾಲೂಕು, ದಕ್ಷಿಣ ಹಾಗೂ ಉತ್ತರ ವಲಯದ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರೌಢಶಾಲಾ ಪರಿಶಿಷ್ಟ ಜಾತಿ ಮತ್ತು ವರ್ಗದ ಮಕ್ಕಳಿಗೆ ಐದು ದಿನಗಳ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ ಹಸಿರು ನಿಶಾನೆ ತೋರಿ‌ಸುವ ಮೂಲಕ ಚಾಲನೆ ನೀಡಿದರು.

ಮಂಡ್ಯನಗರದ ಗುರುಭವನದ ಬಳಿ ಪ್ರವಾಸಕ್ಕೆ ಮಕ್ಕಳನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯ, ದಕ್ಷಿಣ ವಲಯದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಂ.ಇ. ಶಿವಣ್ಣಮಂಗಲ, ಕಾರ್ಯದರ್ಶಿ ಶಿವಕುಮಾರ್, ಉತ್ತರ ವಲಯ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿಗೌಡ ಹಾಜರಿದ್ದರು.

ಕಾರ್ಯದರ್ಶಿ ಶಶಿಧರ್ ಈಚಗೆರೆ, ರಾಜ್ಯಪರಿಷತ್ ಸದಸ್ಯರಾದ ಗೋವಿಂದ್, ವಿಷಯ ಪರಿವೀಕ್ಷಕ ನಾಗರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ವಿಜಯಕುಮಾರ್, ಮುಖ್ಯ ಶಿಕ್ಷಕರ ಸಂಘದ ತಾ. ಅಧ್ಯಕ್ಷ ನಾಗರಾಜ್, ಮುಖ್ಯ ಶಿಕ್ಷಕ ವಸಂತ ಕುಮಾರ್, ಚೈತನ್ಯ ಮೂರ್ತಿ, ಸ್ವಾಮಿ, ಮಂಜುನಾಥ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!